ADVERTISEMENT

ಇತಿಹಾಸ ಸೃಷ್ಟಿಸಲಿದೆ ಸಿದ್ದರಾಮಯ್ಯ ಜನ್ಮದಿನಾಚರಣೆ: ಜಮೀರ್‌ ಅಹ್ಮದ್‌ ಖಾನ್‌

​ಪ್ರಜಾವಾಣಿ ವಾರ್ತೆ
Published 25 ಜುಲೈ 2022, 4:17 IST
Last Updated 25 ಜುಲೈ 2022, 4:17 IST
ಜಮೀರ್‌ ಅಹ್ಮದ್‌ ಖಾನ್‌
ಜಮೀರ್‌ ಅಹ್ಮದ್‌ ಖಾನ್‌   

ಹುಬ್ಬಳ್ಳಿ: ‘ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು, ಇತಿಹಾಸ ಸೃಷ್ಟಿಯಾಗಲಿದೆ’ ಎಂದು ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘50 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ಎಂದಿಗೂ ಜನ್ಮದಿನ ಆಚರಿಸಿಕೊಂಡಿಲ್ಲ. ಕೇಕ್‌ ಸಹ ಕತ್ತರಿಸಿಲ್ಲ. ಈ ಬಾರಿ ಅಭಿಮಾನಿಗಳ ಒತ್ತಡಕ್ಕೆ ಮಣಿದು ಜನ್ಮ ದಿನಾಚರಣೆಗೆ ಒಪ್ಪಿಗೆ ನೀಡಿದ್ದಾರೆ’ ಎಂದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹3,500 ಕೋಟಿ ಅನುದಾನ ನೀಡಿದ್ದರು. ಸಮುದಾಯದ ಪ್ರಗತಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರು. ಜನ್ಮದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಭಾಗವಹಿಸಿ ಅವರ ಋಣ ತೀರಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಶಾಸಕಿ ಕುಸುಮಾವತಿ ಶಿವಳ್ಳಿ, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಇದ್ದರು. ಬಳಿಕ, ಸಿದ್ದರಾಮಯ್ಯ ಜನ್ಮದಿನಾಚರಣೆ ಅಂಗವಾಗಿ ಮುಖಂಡರೊಂದಿಗೆ ಪೂರ್ವಭಾವಿ ಸಭೆ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.