ADVERTISEMENT

ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಸಿರಿಧಾನ್ಯ ಆಹಾರ: ಸಚಿವ ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2021, 8:59 IST
Last Updated 28 ಫೆಬ್ರುವರಿ 2021, 8:59 IST
   

ಹುಬ್ಬಳ್ಳಿ: 'ಶಾಲೆಗಳಲ್ಲಿ ಬಿಸಿಯೂಟಕ್ಕೆ ಮತ್ತು ವಿದ್ಯಾರ್ಥಿನಿಲಯದಲ್ಲೂ ಸಿರಿಧಾನ್ಯ ಆಹಾರ ನೀಡಲು ನಿರ್ಧರಿಸಲಾಗಿದೆ' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನವಲಗುಂದ ತಾಲ್ಲೂಕಿನ ಮೊರಬದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ವಾರಕ್ಕೊಮ್ಮೆ ಮಧ್ಯಾಹ್ನದ ಬಿಸಿಯೂಟಕ್ಕೆ ಮತ್ತು ಹಾಸ್ಟೆಲ್ ನಲ್ಲಿ ದಿನಕ್ಕೊಮ್ಮೆ ಸಿರಿಧಾನ್ಯ ಆಹಾರ ನೀಡಲಾಗುವುದು. ಮೊದಲಿಗೆ ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸಿರಿಧಾನ್ಯ ಬೆಳೆಯುವ ರೈತರಿಗೂ ಉತ್ತೇಜನ ಸಿಕ್ಕಂತಾಗುತ್ತದೆ" ಎಂದರು.

"ರೈತರ ಅನುಕೂಲಕ್ಕಾಗಿ ಇಪ್ಪತ್ತು ಮಂದಿಯ ಕೃಷಿ ಸಹಕಾರ ಸಂಘ ಮಾಡಲಾಗುವುದು. ಸಂಘದ ಸದಸ್ಯರ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಒಂದು ಟ್ರಾಕ್ಟರ್ ನೀಡಲಾಗುವುದು‌. ಈ ವರ್ಷದಿಂದ ರಾಜ್ಯದಾದ್ಯಂತ ನೂರು ಸಂಘಗಳನ್ನು ಸ್ಥಾಪಿಸಲಾಗಿದ್ದು, ಮುಂದೆ ಗ್ರಾಮಕ್ಕೊಂದು ಸಂಘ ಮಾಡಲಾಗುವುದು" ಎಂದರು.

ADVERTISEMENT

"ಕೃಷಿ ಮಿತ್ರ ಯೋಜನೆಯಡಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಣೆ ಮಾಡಲಿದ್ದಾರೆ" ಎಂದು ಹೇಳಿದರು.

ಕಡಲೆ ಖರೀದಿ ಕೇಂದ್ರ, ದಾಸ್ತಾನು ಮಳಿಗೆ ಉದ್ಘಾಟನೆ
ನವಲಗುಂದ ತಾಲ್ಲೂಕಿನ ಮೊರಬದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು, ಬೆಂಬಲ ಬೆಲೆಯಡಿ ಕಡಲೆ ಖರೀದಿ ಕೇಂದ್ರ, ಕೃಷಿ ಯಂತ್ರಧಾರೆ ಹಾಗೂ ದಾಸ್ತಾನು ಮಳಿಗೆಯನ್ನು ಭಾನುವಾರ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.