ಹುಬ್ಬಳ್ಳಿ: ಭಾರತ್ ಬಂದ್ ಬೆಂಬಲಿಸಿ ಕುಂದಗೋಳ ತಾಲ್ಲೂಕಿನ ಬಾರದ್ವಾಡ ಗ್ರಾಮದ ಯೋಧ ರಮೇಶ, ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸೈನಿಕರ ಪೋಷಾಕು ಹಾಕಿಕೊಂಡೇ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ರಜೆಯ ಮೇಲೆ ಊರಿಗೆ ಬಂದಿರುವ ಅವರು ಹೆಗಲ ಮೇಲೆ ಹಸಿರು ಶಾಲು ಹೊದ್ದು, ಕೈಯಲ್ಲಿ ಬಾರುಕೋಲು ಹಿಡಿದಿದ್ದರು. ಜೈ ಜವಾನ್, ಜೈ ಕಿಸಾನ್ ಘೋಷಣೆ ಕೂಗಿದರು.
ಯೋಧನ ವಿಚಾರಣೆ ನಡೆಸಿದ ಪೊಲೀಸರು ದಾಖಲೆಗಳನ್ನು ಪರಿಶೀಲಿಸಿದರು.
ಯಾವ ಸರ್ಕಾರ ಹಾಗೂ ಯಾವ ಪಕ್ಷವೂ ನನಗೆ ಸಂಬಂಧವಿಲ್ಲ. ರೈತರಿಗೆ ಬೆಂಬಲ ವ್ಯಕ್ತಪಡಿಸಲು ಮಾತ್ರ ಬಂದಿದ್ದೇನೆ ಎಂದು ರಮೇಶ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.