ADVERTISEMENT

ನೈರುತ್ಯ ರೈಲ್ವೆ: ಸ್ವಾತಂತ್ರ್ಯ ದಿನಾಚರಣೆ; ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 2:25 IST
Last Updated 30 ಜುಲೈ 2025, 2:25 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ನೈರುತ್ಯ ರೈಲ್ವೆ ಎಸ್.ಎಸ್.ಎಸ್ ಹುಬ್ಬಳ್ಳಿ ಮತ್ತು ಎಸ್.ಎಂ.ವಿ.ಟಿ ಬೆಂಗಳೂರು ಹಾಗೂ ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ.

ADVERTISEMENT

ಎಸ್.ಎಸ್.ಎಸ್ ಹುಬ್ಬಳ್ಳಿ – ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 07375) ಆಗಸ್ಟ್‌ 14ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಎಸ್.ಎಸ್. ಹುಬ್ಬಳ್ಳಿ ನಿಲ್ದಾಣದಿಂದ ಹೊರಡಲಿದ್ದು, ಅದೇ ದಿನ ರಾತ್ರಿ 7.45ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣ ತಲುಪಲಿದೆ. ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. 

ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು (ರೈಲು ಸಂಖ್ಯೆ 06589)  ಆಗಸ್ಟ್‌ 14ರಂದು ರಾತ್ರಿ 9 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಿಗ್ಗೆ 10.45ಕ್ಕೆ ವಿಜಯಪುರ ತಲುಪಲಿದೆ.

ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು (ರೈಲು ಸಂಖ್ಯೆ 06590) ಆಗಸ್ಟ್‌ 17ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 8.10ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣ ತಲುಪಲಿದೆ.

ಮಾರ್ಗದಲ್ಲಿ ಈ ರೈಲುಗಳಿಗೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ. 

ಎಸ್‌.ಎಂ.ವಿ.ಟಿ. ಬೆಂಗಳೂರು - ಬೆಳಗಾವಿ ಎಕ್ಸ್‌ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06551) ಆಗಸ್ಟ್‌ 7, 9, 14 ಮತ್ತು 16ರಂದು ಸಂಜೆ 7 ಗಂಟೆಗೆ ಎಸ್‌.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ – ಎಸ್‌.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06552) ಆಗಸ್ಟ್‌ 8, 10, 15 ಮತ್ತು 17ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 5.00 ಗಂಟೆಗೆ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ,  ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ  ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.