ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ನೈರುತ್ಯ ರೈಲ್ವೆಯು ಯಶವಂತಪುರ– ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ. ಇದಕ್ಕೆ ತತ್ಕಾಲ್ ದರವಿರುತ್ತದೆ.
ಆ.30ರಂದು ರಾತ್ರಿ 11 ಗಂಟೆಗೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 11.15ಕ್ಕೆ ಬೆಳಗಾವಿ ತಲುಪಲಿದೆ. ರೈಲು ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾದಲ್ಲಿ ನಿಲುಗಡೆ ಇರಲಿದೆ.
ಸೆ.2ರಂದು ರಾತ್ರಿ 7 ಗಂಟೆಗೆ ಬೆಳಗಾವಿಯಿಂದ ಹೊರಡುವ ರೈಲು ಮರುದಿನ ಬೆಳಿಗ್ಗೆ 6.20ಕ್ಕೆ ಯಶವಂತಪುರ ತಲುಪಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.