ಹುಬ್ಬಳ್ಳಿ: ದೇಶ ವಿಭಜಿಸುವ ಬಗ್ಗೆ ಹೇಳಿಕೆ ನೀಡಿದ ಸಂಸದ ಡಿ.ಕೆ. ಸುರೇಶ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಈಶ್ವರಪ್ಪ ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.
ದೇಶ ಒಡೆಯೋ ಮಾತು ಬರಬಾರದು. ದೇಶ ಒಡೆಯೋ ಮಾತು ಸರಿ ಅಲ್ಲ. ಇದು ದೇಶದ್ರೋಹಿ ಕೃತ್ಯ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.