ADVERTISEMENT

ಕಾಂಗ್ರೆಸ್‌ಗೆ ಸೋಮಶೇಖರ್, ಹೆಬ್ಬಾರ ಶೀಘ್ರ: ಸಲೀಂ ಅಹ್ಮದ್

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2025, 20:46 IST
Last Updated 16 ಮಾರ್ಚ್ 2025, 20:46 IST
ಸಲೀಂ ಅಹ್ಮದ್‌
ಸಲೀಂ ಅಹ್ಮದ್‌   

ಹುಬ್ಬಳ್ಳಿ: ‘ಬಿಜೆಪಿ ಶಾಸಕರಾದ ಎಸ್.ಟಿ.‌ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ ಅವರು ಶೀಘ್ರವೇ ಪಕ್ಷದಿಂದ ಉಚ್ಚಾಟನೆಯಾಗುವ ನಿರೀಕ್ಷೆಯಿದೆ. ಅವರು ಯಾವಾಗ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗುತ್ತಾರೆ ಎಂಬುದು ನೋಡಬೇಕಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.

‘ಸೋಮಶೇಖರ್ ಮತ್ತು ಹೆಬ್ಬಾರ ಈಗಾಗಲೇ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಬಜೆಟ್ ಕೂಡ ಸ್ವಾಗತಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನ ಕೆಲ ನಾಯಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಈ ಎಲ್ಲದರ ಬಗ್ಗೆ ಪಕ್ಷದ ವರಿಷ್ಠರು ಶೀಘ್ರವೇ ತೀರ್ಮಾನ ಕೈಗೊಳ್ಳುವರು’ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಮೇ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ. ಹಿಂದೆಯೇ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಸಿಗಬೇಕಿತ್ತು. ಈ ಬಾರಿ ಸಿಗುವ ವಿಶ್ವಾಸವಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.