ADVERTISEMENT

ಜೋಶಿ ಜೊತೆ ರಾಜ್ಯ ಸಚಿವರ ಗೋಪ್ಯ ಸಭೆ

​ಪ್ರಜಾವಾಣಿ ವಾರ್ತೆ
Published 22 ಮೇ 2021, 19:31 IST
Last Updated 22 ಮೇ 2021, 19:31 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಸಚಿವ ಸಂಪುಟದ ಪ್ರಮುಖ ಸಚಿವರು ಶುಕ್ರವಾರ ನಗರದಲ್ಲಿ ಗೋಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಆರೋಗ್ಯ ಸಚಿವ ಡಾ. ಸುಧಾಕರ್ ಜೊತೆಗೆ ಶಾಸಕ ರಮೇಶ ಜಾರಕಿಹೊಳಿ ನಗರದ ಹೋಟೆಲ್‌ವೊಂದರಲ್ಲಿ ಶುಕ್ರವಾರ ತಡರಾತ್ರಿವರೆಗೂ ಸಭೆ ನಡೆಸಿ, ಶನಿವಾರ ಬೆಳಿಗ್ಗೆ ಬೆಳಗಾವಿಗೆ ವಾಪಸ್‌ ಹೋಗಿದ್ದಾರೆ. ನಂತರ ಬೈರತಿ ಬಸವರಾಜ, ಸುಧಾಕರ್ ಅವರು ಪ್ರಲ್ಹಾದ ಜೋಶಿ ನಿವಾಸದಲ್ಲಿ ಎರಡು ತಾಸು ಗೋಪ್ಯ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.