ADVERTISEMENT

ಸುಹಾಸ ವ್ಯಾಸಗೆ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತ್ರಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 4:44 IST
Last Updated 21 ಆಗಸ್ಟ್ 2025, 4:44 IST
ಚಿದಂಬರ ಜೋಶಿ
ಚಿದಂಬರ ಜೋಶಿ   

ಧಾರವಾಡ: ಪಂ.ಬಸವರಾಜ ರಾಜಗುರು ಟ್ರಸ್ಟ್‌ ನೀಡುವ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಪುಣೆಯ ಸಂಗೀತ ಕಲಾವಿದ ಪಂ.ಸುಹಾಸ ವ್ಯಾಸ, ರಾಷ್ಟ್ರೀಯ ಯುವ ಪ್ರಶಸ್ತ್ರಿಗೆ ಧಾರವಾಡದ ವಯೋಲಿನ್ ವಾದಕಿ ವೀಣಾ ಮಠ (ದಂಡಾವತಿಮಠ) ಮತ್ತು ರಾಯಚೂರು ಜಿಲ್ಲೆಯ ಮಸ್ಕಿಯ ಹಾರ್ಮೋನಿಯಂ ವಾದಕ ಚಿದಂಬರ ಜೋಶಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಪುರಸ್ಕಾರವು ₹ 1 ಲಕ್ಷ ನಗದು, ಫಲಕ ಹಾಗೂ ಯುವ ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಫಲಕ ಒಳಗೊಂಡಿದೆ. ಆಗಸ್ಟ್ 24 ರಂದು ಬಸವರಾಜ ರಾಜಗುರು ಅವರ 105ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬಸವರಾಜ ರಾಜಗುರು ಜನ್ಮ ದಿನಾಚರಣೆ 24ರಂದು ಧಾರವಾಡ:
ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಆಗಸ್ಟ್ 24ರಂದು ಪಂ. ಬಸವರಾಜ ರಾಜಗುರು ಅವರ 105ನೇ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆಲೂರು ವೆಂಕಟರಾವ ಭವನದಲ್ಲಿ ಸಂಜೆ 5.30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟನೆ ನೆರವೇರಿಸುವರು. ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT