ADVERTISEMENT

ಹೊತ್ತಿ ಉರಿದ ಟ್ಯಾಂಕರ್‌: ಚಾಲಕ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 11:58 IST
Last Updated 25 ಜನವರಿ 2020, 11:58 IST
ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ   

ಕಲಘಟಗಿ: ಡೀಸೆಲ್ ತುಂಬಿದ್ದ ಲಾರಿ ಹಾಗೂ ಟಿಪ್ಪರ್‌ ನಡುವೆ ಶುಕ್ರವಾರ ರಾತ್ರಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿ ಉರಿದ ಘಟನೆ ತಾಲ್ಲೂಕಿನದೇವಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.

ಟಿಪ್ಪರ್‌ ಚಾಲಕ ಯಲ್ಲಾಪುರ ತಾಲ್ಲೂಕಿನವರು ಎಂದು ತಿಳಿದುಬಂದಿದ್ದು, ವಾಹನದಲ್ಲೇ ಸಜೀವ ದಹನವಾಗಿದ್ದಾರೆ. ಲಾರಿಯಲ್ಲಿನ ಚಾಲಕ ಹಾಗೂ ಕ್ಲೀನರ್‌ಅಪಘಾತ ಸಂಭವಿಸುತ್ತಿದ್ದಂತೆ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಡರಾತ್ರಿಯ ತನಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ವಾಹನ
ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಸಿಪಿಐ ವಿಜಯ ಬಿರಾದರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.