ADVERTISEMENT

ಕೊಲೆ ಪ್ರಕರಣ: ಕೋರ್ಟ್‌ಗೆ ಕರೆತಂದಿದ್ದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 21:12 IST
Last Updated 20 ಆಗಸ್ಟ್ 2022, 21:12 IST
ಬಚ್ಚಾ ಖಾನ್‌(ಎಡಬದಿ)ನನ್ನು ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸ್
ಬಚ್ಚಾ ಖಾನ್‌(ಎಡಬದಿ)ನನ್ನು ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸ್   

ಧಾರವಾಡ: ಕೊಲೆ ಪ್ರಕರಣದ ವಿಚಾರಣೆಗೆ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯು, ಸಮೀಪದ ಸತ್ತೂರಿನ ಲಾಡ್ಜ್‌ನಲ್ಲಿ ಯುವತಿ ಜೊತೆಗಿದ್ದ ಪ್ರಕರಣ ನಡೆದಿದೆ. ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನ ವಶಕ್ಕೆ ಪಡೆದರು.

ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. ವಿಚಾ ರಣೆಗೆ ಆತನನ್ನು ಇಲ್ಲಿನ ನ್ಯಾಯಾಲಯಕ್ಕೆ ಶನಿವಾರ ಕರೆತಂದ ವೇಳೆ ಸತ್ತೂರು ಬಳಿಯ ಲಾಡ್ಜ್‌ನಲ್ಲಿ ಯುವತಿಯೊಂದಿಗೆ ಖಾಸಗಿ ಸಮಯ ಕಳೆಯಲು ಪೊಲೀಸರೇಆತನಿಗೆ ವ್ಯವಸ್ಥೆ ಮಾಡಿಕೊಟ್ಟಿರುವುದು ಈಗ ಬೆಳಕಿಗೆ ಬಂದಿದೆ.

‘ಬಚ್ಚಾ ಖಾನ್ ಬರುವ ಮೊದಲೇ ಯುವತಿ ಲಾಡ್ಜ್ ಕೋಣೆಯೊಳಗಿದ್ದಳು. ಪೊಲೀಸರು ಆತನನ್ನು ಅಲ್ಲಿಗೆ ಕರೆತಂದು ಬಿಟ್ಟರು.ಈ ಖಚಿತ ಮಾಹಿತಿ ಆಧರಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್‌ ಮತ್ತು ಇತರ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಆರೋಪಿಯನ್ನು ವಿದ್ಯಾಗಿರಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಪ್ರತಿ ಬಾರಿ ವಿಚಾರಣೆಗೆ ಬರುವಾಗ ಈತ ನಗರದ ಸುತ್ತಮುತ್ತಲಿನ ಲಾಡ್ಜ್‌ಗಳನ್ನು ಮೊದಲೇ ಕಾಯ್ದಿರಿಸಿ, ಖಾಸಗಿ ಸಮಯ ಕಳೆಯುತ್ತಿದ್ದ ಎಂಬ ಮಾಹಿತಿಯನ್ನೂ ಪೊಲೀಸರು ಕಲೆ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.