ಹುಬ್ಬಳ್ಳಿ: ನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹೂವಿನ ಹಾರ ಹಾಕಲು ಬ್ಯಾರಿಕೇಡ್ ಹಾರಿ ಬಂದ ಬಾಲಕ ತೊರವಿ ಹಕ್ಕಲದ ಹನ್ನೊಂದು ವರ್ಷದ ಕುನಾಲ್ ಸುರೇಶ್ ಎಂದು ಗೊತ್ತಾಗಿದೆ.
ಘಟನೆ ಬಳಿಕ ಬಾಲಕ ನಾಪತ್ತೆಯಾಗಿದ್ದು, ಪೊಲೀಸರು ಆತನ ಪೋಷಕರನ್ನು ಕಮರಿಪೇಟೆ ಠಾಣೆಗೆ ಕರೆಸಿ ಪುತ್ರನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಗೆ ಭದ್ರತಾ ವೈಫಲ್ಯ ಕಾರಣ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪೊಲೀಸರು ಬಾಲಕನ ಹುಡುಕಾಟದಲ್ಲಿ ತೊಡಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.