ಹುಬ್ಬಳ್ಳಿ: ಯುವಜನೋತ್ಸವ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅಗಮಿಸಲಿರುವ ಹಿನ್ನೆಲೆಯಲ್ಲಿ, ಅವರು ಸಂಚರಿಸಲಿರುವ ನಗರದ ವಿಮಾನದಿಂದ ರೈಲ್ವೆ ಮೈದಾನದವರೆಗಿನ ಮಾರ್ಗದಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ 3.45ಕ್ಕೆ ತಲುಪಲಿರುವ ಪ್ರಧಾನಿ ಮೋದಿ, ಸಂಜೆ 4ಕ್ಕೆ ರೈಲ್ವೆ ಮೈದಾನಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗೋಕುಲ ರಸ್ತೆ, ಹೊಸೂರು ವೃತ್ತ, ದೇಶಪಾಂಡೆ ನಗರ, ಶಿರೂರು ಪಾರ್ಕ್, ಹಳೇ ಕೋರ್ಟ್ ವೃತ್ತ, ದೇಸಾಯಿ ವೃತ್ತ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಯುವಜನೋತ್ಸವ ಉದ್ಘಾಟನಾ ಸಮಾರಂಭಕ್ಕೆ ಬಂದಿರುವ ಸಾರ್ವಜನಿಕರಿಗೆ ಕೋರ್ಟ್ ವೃತ್ತದ ಬಳಿಯ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ, ಸವಾಯಿ ಗಂಧರ್ವ ಹಾಲ್ ಬಳಿ ಊಟದ ವ್ಯವಸ್ಥೆ ಮಾಡಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.