ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದ ಸಾಂಬಯ್ಯ ಎಸ್. ಹಿರೇಮಠ ಅವರು ಕರ್ನಾಟಕ ಜಾನಪದ ಪರಿಷತ್ತಿನ 2021ನೇ ಸಾಲಿನ ’ಜಾನಪದ ಲೋಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕದ ಜನಪದ ಕಲೆಯ ಉಳಿವಿಗೆ ಹಿರೇಮಠ ಅವರು ನೀಡಿದ ಕೊಡುಗೆ ಪರಿಗಣಿಸಿ ಪರಿಷತ್ತು ಈ ಪ್ರಶಸ್ತಿ ಪ್ರಕಟಿಸಿದೆ. ರಾಮನಗರದ ಜನಪದ ಲೋಕದಲ್ಲಿ ಮಾರ್ಚ್ 12ರಿಂದ 14 ರ ವರೆಗೆ ನಡೆಯುವ ಪ್ರವಾಸಿ ಜನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ₹10 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.
ಹಿರೇಮಠ ಅವರು ತಮ್ಮ ಸಿವೈಸಿಡಿ ತಂಡದೊಂದಿಗೆ ನಾಡಿನಾದ್ಯಂತ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಜನಪದ ಕಲೆ, ಬೀದಿ ನಾಟಕಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.