ಹುಬ್ಬಳ್ಳಿ: ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಬೆಳಿಗ್ಗೆಯಿಂದ ಉರಿಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಮಳೆ ಸುರಿದಿದ್ದು ತಂಪು ವಾತಾವರಣ ಸೃಷ್ಟಿಯಾಗಿತ್ತು. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿದ ವರದಿಯಾಗಿಲ್ಲ.
ನಗರದ ಚಂದ್ರಮೌಳೇಶ್ವರ ದೇವಸ್ಥಾನ, ನೃಪತುಂಗಬೆಟ್ಟ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಸಿದ್ಧಾರೂಢ ಸ್ವಾಮಿ ಮಠದ ಸುತ್ತಮುತ್ತ ಸೇರಿದಂತೆ ನಗರದಾದ್ಯಂತ ಮಳೆಯಾಗುತ್ತಿದ್ದು, ಜನರ ದಿನ ನಿತ್ಯದ ಚಟುವಟಿಕೆಗಳಿಗೆ ಸ್ವಲ್ಪ ಮಟ್ಟಿನ ತಡೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.