ADVERTISEMENT

ಸ್ಕೂಟರ್‌ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 13:32 IST
Last Updated 7 ಏಪ್ರಿಲ್ 2021, 13:32 IST

ಹುಬ್ಬಳ್ಳಿ: ವಿದ್ಯಾನಗರದ ಕಾಡಸಿದ್ಧೇಶ್ವರ ಕಾಲೇಜ್ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಯಲ್ಲಾಪುರ ಓಣಿಯ ರಾಜಾಸಾಬ್‌ ಮುಲ್ಲಾ ಮತ್ತು ಖಾಜಾಸಾಬ್‌ ಮುಲ್ಲಾ ಮೃತಪಟ್ಟವರು. ಧಾರವಾಡದಿಂದ ಹುಬ್ಬಳ್ಳಿಗೆ ಸ್ಕೂಟಿ ಮೇಲೆ ಬರುತ್ತಿದ್ದಾಗ, ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕ ಪರಾರಿಯಾಗಿದ್ದಾನೆ. ಉತ್ತರ ಸಂಚಾರ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT