ಹುಬ್ಬಳ್ಳಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದರು.
ಭಾರಿ ಬಿಗಿ ಭದ್ರತೆ ಇದ್ದ ಕಾರಣ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ವಿಮಾನ ನಿಲ್ದಾಣ ಪ್ರವೇಶ ನಿಷೇಧಿಸಲಾಗಿತ್ತು. ಶಾ ಜೊತೆ ಒಂದೇ ವಿಮಾನದಲ್ಲಿ ಬಂದ ಕೇಂದ್ರ ಸಚಿವ ಪಿಯೂಷ್ ಗೊಯೆಲ್ ಹುಬ್ಬಳ್ಳಿಯ ಹೋಟೆಲ್ನಲ್ಲಿ ತಂಗಿದ್ದಾರೆ. ಇಂದು ಸಂಜೆ ಅಮಿತ್ ಶಾ ನಗರಕ್ಕೆ ಮರಳಿ ಬರಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ– ದಾವಣಗೆರೆ: ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.