ADVERTISEMENT

ವಿಶ್ವಕ್ಕೆ ಅತ್ಯುತ್ತಮ ಗ್ರಂಥ ಕೊಟ್ಟ ವಾಲ್ಮೀಕಿ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 8:44 IST
Last Updated 9 ಅಕ್ಟೋಬರ್ 2022, 8:44 IST
   

ಹುಬ್ಬಳ್ಳಿ: ‘ನೈಜ ಘಟನೆಯನ್ನ ರಾಮಾಯಣದಲ್ಲಿ ಚಿತ್ರಿಸಿದ ಮಹರ್ಷಿ ವಾಲ್ಮೀಕಿ ಅವರು, ವಿಶ್ವಕ್ಕೆ ಅತ್ಯುತ್ತಮವಾದ ರಾಮಾಯಣ ಗ್ರಂಥವನ್ನು ಕೊಟ್ಟರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ವಾಲ್ಮೀಕಿ ಜಯಂತಿ ಅಂಗವಾಗಿ, ನಗರ ಇಂದಿರಾ ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ವಾಲ್ಮೀಕಿ ದೇಶ‌ ಕಂಡ ಶ್ರೇಷ್ಠ ದಾರ್ಶನಿಕ. ಅವರು ನೀಡಿರುವ ಸಾರ್ವಕಾಲಿಕ ಶ್ರೇಷ್ಠ ಗ್ರಂಥ ರಾಮಾಯಣದ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.