ADVERTISEMENT

ಜ. 29ರಿಂದ ಕೇಂದ್ರ ಬಜೆಟ್ ಅಧಿವೇಶನ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 6:37 IST
Last Updated 10 ಜನವರಿ 2021, 6:37 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಇದೇ ತಿಂಗಳ 29ರಿಂದ ಫೆಬ್ರುವರಿ 15ರ ತನಕ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. 30ರಂದು ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 8ರಿಂದ ಏಪ್ರಿಲ್ 8ರ ತನಕ ಎರಡನೇ ಅವಧಿಯ ಬಜೆಟ್ ಅಧಿವೇಶನ ‌ಜರುಗಲಿದೆ. ಫೆ. 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಕರ್ನಾಟಕಕ್ಕೆ ಅಗತ್ಯವಾಗಿ ಬೇಕಾದ ಸೌಲಭ್ಯಗಳ ಆದ್ಯತೆ ಪಟ್ಟಿಯನ್ನು ಕೇಂದ್ರಕ್ಕೆ ನೀಡಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಯಲಿದೆ. ಕೋವಿಡ್ ಬಳಿಕ ಮೊದಲ ಸಲ ಪೂರ್ಣ ಪ್ರಮಾಣದಲ್ಲಿ ಸರ್ವಪಕ್ಷಗಳ ಸಭೆ ಜರುಗಲಿದೆ. ಪ್ರಶ್ನೋತ್ತರ ಅವಧಿಯೂ ಇರಲಿದೆ ಎಂದರು.

ADVERTISEMENT

ಕೋವಿಡ್ ಲಸಿಕೆಯನ್ನು ಮೊದಲು ಪ್ರಧಾನಿ ತೆಗೆದುಕೊಳ್ಳಲಿ ಎಂದು ಕಾಂಗ್ರೆಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಮೋದಿ ಅವರನ್ನು ಹಾಗೂ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ದೇಶವನ್ನೇ ವಿರೋಧಿಸುತ್ತಿದೆ. ಸಾಕಷ್ಟು ಶ್ರಮಪಟ್ಟು ಲಸಿಕೆ ಕಂಡು ಹಿಡಿದ ವಿಜ್ಞಾನಿಗಳಿಗೆ ಅವಮಾನ ಮಾಡುತ್ತಿದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.