ADVERTISEMENT

ಉಪ್ಪಿನಬೆಟಗೇರಿ: ಹಿಂದೂ ಸಮ್ಮೇಳನ ಫೆ.22ರಂದು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 0:53 IST
Last Updated 22 ಫೆಬ್ರುವರಿ 2026, 0:53 IST
   

ಉಪ್ಪಿನಬೆಟಗೇರಿ: ಹಿಂದೂ ಸಮ್ಮೇಳನದ ಅಂಗವಾಗಿ ಫೆ. 22ರಂದು ಮಧ್ಯಾಹ್ನ 1ಕ್ಕೆ ಇಲ್ಲಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಸಂಜೆ 5ಕ್ಕೆ ಶ್ರೀಗುರು ವಿರೂಪಾಕ್ಷೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕರ್ನಾಟಕ ಉತ್ತರ ಪ್ರಾಂತ ಸಂಸ್ಕೃತ ಭಾರತಿ ಪ್ರಾಂತ ಮಂತ್ರಿ ಶ್ರೀಕಾಂತ ಕುಲಕರ್ಣಿ ಅವರು ದಿಕ್ಸೂಚಿ ಭಾಷಣ ನೀಡುವರು. ಹಿಂದೂ ಸಮ್ಮೇಳನ ಆಯೋಜನಾ ಸಮಿತಿ ಅಧ್ಯಕ್ಷ ಕಲ್ಲಯ್ಯ ವಿಭೂತಿಮಠ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT