ಬೆಂಗಳೂರು: ಧಾರವಾಡಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.
ಒಂದು ತಿಂಗಳ ಹಿಂದೆ ರಾಜ್ಯ ಸರ್ಕಾರ ವರ್ತಿಕಾ ಅವರನ್ನು ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಅವರು ಸಿಎಟಿಯಲ್ಲಿ ಪ್ರಶ್ನಿಸಿದ್ದರು.
ಇದನ್ನೂ ಓದಿ:ಟಿಪ್ಪು ಜಯಂತಿ ಗಲಭೆ,ವರ್ತಿಕಾ ಕಟಿಯಾರ್ ಆರೋಪ ಮುಕ್ತ
ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಆಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಧಾರವಾಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಾಜ್ಯ ಸರ್ಕಾರ ಆಗಸ್ಟ್ 30ರಂದು ನೇಮಿಸಿತ್ತು.ಅದಕ್ಕೂಮೊದಲು ಜಿ.ಸಂಗೀತಾ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.