ಹುಬ್ಬಳ್ಳಿ: ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
‘ಬೆಳಿಗ್ಗೆ ಹೊಸಪೇಟೆಗೆ ಕಾರಿನಲ್ಲಿ ಹೋಗುವಾಗ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಸಮೀಪ ಜನರು ಗುಂಪುಗೂಡಿದ್ದರು. ಇಳಿದು ಏನೆಂದು ನೋಡಿದಾಗ ಯುವಕನೊಬ್ಬ ಬೈಕ್ನಿಂದ ಬಿದ್ದು ಗಾಯಗೊಂಡಿದ್ದು ಗೊತ್ತಾಯಿತು. ಆತನನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದೆ’ ಎಂದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.