ADVERTISEMENT

ವಿಜೃಂಭಣೆಯಿಂದ ನಡೆದ ವೀರಭದ್ರೇಶ್ವರ ರಥೋತ್ಸವ, ಮೆರುಗು ನೀಡಿದ ಕಲಾತಂಡಗಳು

ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 9:58 IST
Last Updated 11 ಡಿಸೆಂಬರ್ 2018, 9:58 IST
ಹಳೇ ಹುಬ್ಬಳ್ಳಿ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕಲಾತಂಡಗಳು– ಪ್ರಜಾವಾಣಿ ಚಿತ್ರ
ಹಳೇ ಹುಬ್ಬಳ್ಳಿ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕಲಾತಂಡಗಳು– ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಅಗ್ನಿ‌ ಮಹೋತ್ಸವ ಹಾಗೂ ರಥೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕರಡಿ ಮಜಲು, ದಾಲಪಟ, ಡೊಳ್ಳು, ನಂದಿಕೋಲು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಎತ್ತುಗಳ ಮೆರವಣಿಗೆ ವಿಶೇಷ ಆಕರ್ಷಣೆಯಾಗಿತ್ತು.

ಅಕ್ಕಿ ಹೊಂಡ, ದುರ್ಗದ ಬೈಲ್, ಅಕ್ಜಿಪೇಟೆ, ಜಂಗ್ಲಿಪೇಟೆ, ಹಿರೇಪೆಟೆ, ಗೋಡ್ಕೆ ಓಣಿ ಮೂಲಕ ಸಾಗಿದ ಮೆರವಣಿಗೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಮೆರವಣಿಗೆ ಮುಗಿದ ನಂತರ ಪಲ್ಲಕ್ಕಿಯನ್ನು ಅಗ್ನಿ ಮೂಲಕ ದೇವಸ್ಥಾನದ ಒಳಗೆ ಕೊಂಡೊಯ್ಯಲಾಯಿತು (ಅಗ್ನಿ ಪ್ರವೇಶ). ಪೂಜೆ ಮತ್ತು ಮಹಾ ಮಂಗಳಾರತಿ ಆ ನಂತರ ರಥೋತ್ಸವ ನಡೆಯಿತು.

ADVERTISEMENT

ಮಧ್ಯಾಹ್ನ 12 ಗಂಟೆ ಸುಮಾರಿಗೆ ಅನ್ನ ಸಂತರ್ಪಣೆಗೆ ಚಾಲನೆ ನೀಡಲಾಯಿತು. ಸಂಜೆ ವರೆಗೆ ಸಾವಿರಾರು ಜನ ಪ್ರಸಾದ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.