ADVERTISEMENT

ಹುಬ್ಬಳ್ಳಿಗೆ ಉಪರಾಷ್ಟ್ರಪತಿ: ಬಸವರಾಜ ಬೊಮ್ಮಾಯಿ ಅವರಿಂದ ಸ್ವಾಗತ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 6:38 IST
Last Updated 22 ಆಗಸ್ಟ್ 2021, 6:38 IST
   

ಹುಬ್ಬಳ್ಳಿ: ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿ ಬಂದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡುಹಾಗೂ ಅವರ ಪತ್ನಿ ಎಂ. ಉಷಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರದ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಬೊಮ್ಮಾಯಿ ಅವರೊಂದಿಗೆಸಚಿವ ಶಂಕರಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಕಮಿಷನರ್ ಲಾಬೂ ರಾಮ್ಅವರಿದ್ದರು.

ನಂತರ ಗೋಕುಲ ರಸ್ತೆಯ ಖಾಸಗಿ ಹೊಟೆಲ್‌ವೊಂದರಲ್ಲಿ ಏರ್ಪಡಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಮರಳಿ ವಿಮಾನ ನಿಲ್ದಾಣಕ್ಕೆ ಬಂದ ಉಪರಾಷ್ಟ್ರಪತಿ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.