ADVERTISEMENT

ಧಾರವಾಡ | ಅಧಿಕಾರ ವಹಿಸಿಕೊಳ್ಳಲು ಹೊರಟಿದ್ದ ವಿಜಯಪುರ ನೂತನ ಡಿಸಿ ಕಾರು ಅಪಘಾತ

ಪ್ರಾಣಾಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 5:18 IST
Last Updated 19 ಏಪ್ರಿಲ್ 2022, 5:18 IST
ಅಪಘಾತಕ್ಕೀಡಾದ ಕಾರು
ಅಪಘಾತಕ್ಕೀಡಾದ ಕಾರು   

ಧಾರವಾಡ: ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರಅವರಿದ್ದ ಕಾರು ಮಂಗಳವಾರ ಬೆಳಿಗ್ಗೆ ಇಲ್ಲಿನ ಯರಿಕೊಪ್ಪ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ.

ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದ ಇವರ ಕಾರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಸಂದರ್ಭದಲ್ಲಿ ಕಾರಿನಲ್ಲಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಅಳಿಯ ಪ್ರವಿಣಕುಮಾರ ಇದ್ದರು.ತಕ್ಷಣ ಇವರನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಪ್ರವೀಣ್ ಕುಮಾರ್ ಅವರಿಗೆ ಬೆನ್ನುಹುರಿಗೆ ಪೆಟ್ಟಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರೆಲ್ಲ ಆರೋಗ್ಯವಾಗಿದ್ದರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.