ಹುಬ್ಬಳ್ಳಿ: ‘ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ 11 ಎಫ್ಐಆರ್ಗೆ ಹೈಕೋರ್ಟ್ ಧಾರವಾಡ ಪೀಠ ತಡೆ ನೀಡಿದ್ದು, ಅದನ್ನು ತೆರವುಗೊಳಿಸುವ ಕುರಿತು ಅಧಿಕಾರಿಗಳು ಮೇಲ್ಮನವಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕಕುಮಾರ ಹೇಳಿದರು.
ಶುಕ್ರವಾರ ರಾತ್ರಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಏ. 16ರಂದು ನಡೆದ ಗಲಭೆ ಪ್ರಕರಣದ ಕಡತಗಳನ್ನು ಪರಿಶೀಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳಿಂದ ಎಲ್ಲ ಮಾಹಿತಿಗಳನ್ನು ಪಡೆದಿದ್ದೇನೆ. ಅಧಿಕಾರಿಗಳು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ದಾಖಲಾದ ಎಫ್ಐಆರ್ಗಳಿಗೆ ನೀಡಿರುವ ತಡೆಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ತಯಾರಿ ನಡೆಯುತ್ತಿದೆ’ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.