ADVERTISEMENT

ಎಪಿಎಂಸಿ ಮುಚ್ಚಿದರೆ ಏನಾಗುತ್ತದೆ: ಸಚಿವ ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 7:45 IST
Last Updated 25 ಜನವರಿ 2021, 7:45 IST
   

ಹುಬ್ಬಳ್ಳಿ: 'ಎಪಿಎಂಸಿ ಹೊರಗಡೆ ರೈತರ ಉತ್ಪನ್ನಗಳಿಗೆ ಹೆಚ್ಚು ಬೆಲೆ ಸಿಗುತ್ತದೆ ಎಂದಾದರೆ, ಎಪಿಎಂಸಿ ಮುಚ್ಚಿದರೆ ಏನಾಯ್ತು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪ್ರಶ್ನಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ‌ ಸಿಗಲಿದೆ. ಎಪಿಎಂಸಿಯಲ್ಲಿ ಮಧ್ಯವರ್ತಿಗಳ ಹಿತಬೇಕೋ, ಹೊರಗಡೆ ರೈತರ ಪ್ರಗತಿ ಬೇಕೋ ಎಂದು ರೈತರೇ ನಿರ್ಧರಿಸಲಿ' ಎಂದು ಹೇಳಿದರು.

'ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ‌ ಕುಮ್ಮಕ್ಕಿನಿಂದ ಪ್ರತಿಭಟನೆ ನಡೆಯುತ್ತಿದೆ. ನಿಜವಾದ ರೈತರು ಅದರಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದ ಕಾರಣ, ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜಕೀಯ‌ ಪ್ರೇರಿತ ಪ್ರತಿಭಟನೆಗೆ ರೈತರು ಬೆಂಬಲ ನೀಡಬಾರದು' ಎಂದು ವಿನಂತಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.