ADVERTISEMENT

ಸಾಹಿತ್ಯ ಭವನ ನಿರ್ಮಾಣಕ್ಕೆ ಜಾಗ: ಪುರಸಭೆ ಅಧ್ಯಕ್ಷೆ ಗಂಗಾ ರಮೇಶ ಕರೆಟ್ಟನವರ

​ಪ್ರಜಾವಾಣಿ ವಾರ್ತೆ
Published 7 ಮೇ 2022, 3:46 IST
Last Updated 7 ಮೇ 2022, 3:46 IST
ಅಣ್ಣಿಗೇರಿಯ ಆದಿಕವಿ ಪಂಪನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆಯಲ್ಲಿ ಪುರಸಭೆ ಅಧ್ಯಕ್ಷೆ ಗಂಗಾ ಕರೆಟ್ಟನವರ ಅವರನ್ನು ಸನ್ಮಾನಿಸಲಾಯಿತು
ಅಣ್ಣಿಗೇರಿಯ ಆದಿಕವಿ ಪಂಪನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆಯಲ್ಲಿ ಪುರಸಭೆ ಅಧ್ಯಕ್ಷೆ ಗಂಗಾ ಕರೆಟ್ಟನವರ ಅವರನ್ನು ಸನ್ಮಾನಿಸಲಾಯಿತು   

ಅಣ್ಣಿಗೇರಿ: ಕನ್ನಡ ಸಾಹಿತ್ಯ ಪರಿಷತ್ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಕನ್ನಡ ಪರ ಕಾರ್ಯಕ್ರಮಗಳನ್ನು ಏರ್ಪಡಿಸಿ ಭಾಷಾಭಿಮಾನ ಹೆಚ್ಚಿಸಲು ಶ್ರಮಿಸುತ್ತಿದೆ ಎಂದು ಪುರಸಭೆ ಅಧ್ಯಕ್ಷೆ ಗಂಗಾ ರಮೇಶ ಕರೆಟ್ಟನವರ ಹೇಳಿದರು.

ಆದಿಕವಿ ಪಂಪನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು. ಪಟ್ಟಣದಲ್ಲಿ ಸಾಹಿತ್ಯ ಭವನ ನಿರ್ಮಿಸಲು ಪುರಸಭೆ ವತಿಯಿಂದ ಜಾಗ ನೀಡಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಶಿಕ್ಷಕ ಎನ್.ಎಸ್ ಮೇಲ್ಮರಿ, ಡಾ. ಮೋಹನ ಅಣ್ಣಿಗೇರಿ ಮಾತನಾಡಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ರವಿರಾಜ ವೇರ್ಣೆಕರ್‌ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT