ADVERTISEMENT

ಆದಾಯ ತೆರಿಗೆ ಸಲ್ಲಿಕೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 16 ಜುಲೈ 2023, 13:59 IST
Last Updated 16 ಜುಲೈ 2023, 13:59 IST
ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮಹೇಶ್ ಬೇಡಿಗೇರಿ ಮಾತನಾಡಿದರು
ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮಹೇಶ್ ಬೇಡಿಗೇರಿ ಮಾತನಾಡಿದರು   

ಕುಂದಗೋಳ: ಆದಾಯ ತೆರಿಗೆ ಎಂದರೇನು, ಅದನ್ನು ಹೇಗೆ ನಿರ್ವಹಣೆ ಮಾಡಬೇಕು, ಹೇಗೆ ರಿಟರ್ನ್ ಸಲ್ಲಿಸಬೇಕು ಎನ್ನುವ ಕುರಿತು ಹುಬ್ಬಳಿಯ ಹಣಕಾಸು ಗ್ಲೋಬಲ್ ಬಿಸಿನೆಸ್ ಸ್ಕೂಲ್‌ನ ಡಾ.ಮಹೇಶ್ ಬೇಡಿಗೇರಿ ತಿಳಿಸದರು.

ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಇ- ಆದಾಯ ತೆರಿಗೆ ರಿಟರ್ನ್ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವೈಯಕ್ತಿಕ ಆದಾಯ ತೆರಿಗೆ ರಿಟರ್ನ್, ಅದರಿಂದ ಆಗುವ ಪರಿಣಾಮಗಳ ಕುರಿತು ಅವರು ವಿವರಿಸಿದರು.

ADVERTISEMENT

ಗ್ಲೋಬಲ್ ಕಾಲೇಜಿನ ಕುಮಾರಿ ಗ್ಲೋರಿಯಾ, ಪ್ರೊ. ರಮೇಶ ಯ. ಅತ್ತಿಗೇರಿ, ಸಿ.ಎಸ್.ಗುರುಮಠ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.