ADVERTISEMENT

ಬಜೆಟ್‌ನಲ್ಲಿ ಬಡ್ಡಿ, ಸುಸ್ಥಿರ ಬಡ್ಡಿ ‌ಮನ್ನಾ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 10:14 IST
Last Updated 9 ಫೆಬ್ರುವರಿ 2020, 10:14 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಹುಬ್ಬಳ್ಳಿ: ಈ ಬಜೆಟ್‌ನಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಬಡ್ಡಿ ಹಾಗೂ ಸುಸ್ಥಿ ಸಾಲದ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು‌.

ಇಂದು ಹುಬ್ಬಳ್ಳಿಗೆ ಭೇಟಿ ನೀಡಿರುವ ಅವರು, ‘ಮಾರ್ಚ್‌ ೫ ರಂದು ಬಜೆಟ್ ಮಂಡನೆಯಾಗಲಿದೆ. ಈಗಾಗಲೇ ಸಿದ್ದತೆ ನಡೆಯುತ್ತಿದೆ. ಬಜೆಟ್ ನಲ್ಲಿ ಸಹಕಾರ ಬ್ಯಾಂಕಗಳ ರೈತರ ಬಡ್ಡಿ ಹಾಗೂ ಸುಸ್ತಿಬಡ್ಡಿ ಮನ್ನಾ ಮಾಡಲಾಗುವುದು. ಬಡ್ಡಿ ಮನ್ನಾದಿಂದ ₹400 ಕೋಟಿ ರೂಪಾಯಿಗೂ ಅಧಿಕ ಹೊರೆಯಾಗಲಿದೆ‘ ಎಂದು ತಿಳಿಸಿದರು.

ಮಹದಾಯಿ ವಿಚಾರವಾಗಿ ಕೆಲ ದಿನಗಳಲ್ಲಿ ದೆಹಲಿಗೆ ಹೋಗಿ ಮಾತನಾಡುತ್ತೇನೆ. ಆ ಬಗ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಿದ್ದತೆ ನಡೆಯುತ್ತಿದೆ ಎಂದು ಬಿಎಸ್‌ವೈ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.