ಧಾರವಾಡ: ತೈಲ ಬೆಲೆ ಸುಂಕ ಏರಿಕೆಗೆ ಸಂಬಂಧಿಸಿದಂತೆವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಅವರು ಮಾತನಾಡಿ,ರಾಜ್ಯ ಸರ್ಕಾರ ಸಾಮಾನ್ಯ ಜನರ ಮೇಲೆ ಹೊಸ ಹೊಸ ತೆರಿಗೆ ಹೇರಲು ಹೊರಟಿದೆ. ತೈಲ ಬೆಲೆ ಸುಂಕ ಕೂಡಲೇ ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ವಿಧಾನಸೌಧದ ವೆಸ್ಟ್ ಗೇಟ್ಬಳಿ ಸಿಕ್ಕ ಹಣವೇ ಉದಾಹರಣೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕುಮಾರಸ್ವಾಮಿ ಅಧಿಕಾರಕ್ಕೆ ಬರುವ ಮೊದಲು ಗಣಿಗಾರಿಗೆ ವಿರುದ್ಧ ಮಾತನಾಡಿದ್ದರು. ಈಗ ಮತ್ತೆ ಬಳ್ಳಾರಿಯಲ್ಲಿ ಗಣಿಗಾರಿಕೆ ಪ್ರಾರಂಭವಾಗಿದೆ. ಅವರು ಕೊಟ್ಟ ಮಾತುಉಳಿಸಿಕೊಳ್ಳಲಿಲ್ಲ ಎಂದು ಲೇವಡಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.