ಕಲಬುರ್ಗಿ: ಕೋವಿಡ್ ಹೆಚ್ಚು ವ್ಯಾಪಕವಾಗಿ ಹರಡಿರುವ ಬ್ರಿಟನ್ನಿಂದ ಜಿಲ್ಲೆಗೆ ಬಂದಿರುವ ಐದು ಜನರನ್ನು ನಿಗದಿತ ಮಾನದಂಡಗಳ ಪ್ರಕಾರ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ಈ ಬಗ್ಗೆ ಜನರು ಆತಂಕಕ್ಕೊಳಗಾಗಬಾರದು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮನವಿ ಮಾಡಿದ್ದಾರೆ.
ಒಟ್ಟಾರೆ ಏಳು ಜನ ಬ್ರಿಟನ್ನಿಂದ ಜಿಲ್ಲೆಗೆ ಬಂದಿದ್ದರು. ಅವರಲ್ಲಿ ಇಬ್ಬರು ಬೀದರ್ಗೆ ತೆರಳಿದ್ದಾರೆ. ಉಳಿದ ಐವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜಶೇಖರ ಮಾಲಿ, ‘ಡಿಸೆಂಬರ್ 6, 8, 16 ಹಾಗೂ 18ರಂದು ಐವರು ಜಿಲ್ಲೆಗೆ ಬಂದಿದ್ದಾರೆ. ಅವರಲ್ಲಿ ಒಬ್ಬ ವಿದ್ಯಾರ್ಥಿ ಲಂಡನ್ನಲ್ಲಿದ್ದರು. ಉಳಿದವರು ಬ್ರಿಟನ್ನ ಬೇರೆಡೆ ಇದ್ದರು. ಅವರನ್ನು ಇದೇ 23ರಂದು ಮತ್ತೊಮ್ಮೆ ಕೋವಿಡ್ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.