ADVERTISEMENT

ಅನ್ಯಾಯದ ವಿರುದ್ಧ ಹೋರಾಡಲು ಸಂಘಟನೆಗಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2012, 7:20 IST
Last Updated 10 ನವೆಂಬರ್ 2012, 7:20 IST

ಲಕ್ಷ್ಮೇಶ್ವರ: ಸಮಾಜದಲ್ಲಿ ಇಂದು ಎಲ್ಲ ರಂಗಗಳಲ್ಲಿ ಭ್ರಷ್ಟಾಚಾರ ಹಾಗೂ ಅನ್ಯಾಯ ತುಂಬಿ ತುಳುಕುತ್ತಿದ್ದು ಸಂಘ ಸಂಸ್ಥೆಗಳು ಇವುಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಎಸ್.ಎನ್. ಪಾಟೀಲ ಸಲಹೆ ನೀಡಿದರು.

ಪಟ್ಟಣದ ಕೆಂಚಲಾಪುರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ನವಕರ್ನಾಟಕ ಜನಪರ ಅಭಿವೃದ್ಧಿ ವೇದಿ ಕೆಯ ಲಕ್ಷ್ಮೇಶ್ವರ ಪಟ್ಟಣದ ಅಲ್ಪ ಸಂಖ್ಯಾತರ ಹಾಗೂ ಕಾರ್ಮಿಕ ಘಟಕ ಗಳನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜ ಸೇವೆಯ ಸೋಗಿನಲ್ಲಿ ಇಂದು ನೂರಾರು ಸಂಘಟನೆಗಳು ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಆದರೆ ಜನರ ಸೇವೆಯೇ ಮುಖ್ಯ ಗುರಿಯನ್ನಾಗಿಸಿಕೊಂಡು ಹೋರಾಟ ಮಾಡುವ ಸಂಘಟನೆಗಳು ಬೆಳಕಿಗೆ ಬರುತ್ತವೆ. ಈ ನಿಟ್ಟಿನಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡು ತ್ತಿರುವುದು ಶ್ಲಾಘನೀಯ ಎಂದರು.

ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಐ.ಮುಳಗುಂದ ದೀನ ದಲಿತರು ಹಾಗೂ ಬಡವರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಆ ಯೋಜನೆಗಳು ಸರಿಯಾದ ಫಲಾನುಭವಿಗಳಗೆ ದೊರೆಯುತ್ತಿಲ್ಲ. ಹೀಗಾಗಿ ಬಡವರು ಇವುಗಳಿಂದ ವಂಚಿತರಾಗಿದ್ದು ಇಂಥವರ ಸಮಸ್ಯೆಗೆ ಸ್ಪಂದಿಸುವಲ್ಲಿ ವೇದಿಕೆ ಸದಾ ಮುಂದೆ ಇರುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.