ADVERTISEMENT

ಪಕ್ಷಿ ಸಂಕುಲ ಸಂರಕ್ಷಣೆಗೆ ಮುಂದಾಗಿ: ರಡ್ಡೇರ್

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 10:45 IST
Last Updated 25 ಜನವರಿ 2012, 10:45 IST
ಪಕ್ಷಿ ಸಂಕುಲ ಸಂರಕ್ಷಣೆಗೆ ಮುಂದಾಗಿ: ರಡ್ಡೇರ್
ಪಕ್ಷಿ ಸಂಕುಲ ಸಂರಕ್ಷಣೆಗೆ ಮುಂದಾಗಿ: ರಡ್ಡೇರ್   

ನರೇಗಲ್:  ಪಕ್ಷಿ ಸಂಕುಲ ಸಂರಕ್ಷಣೆ ಕಾರ್ಯಕ್ಕೆ  ಪ್ರತಿಯೊಬ್ಬರು ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ  ಯುವಕರು ಶ್ರಮಿಸಬೇಕು ಎಂದು ಶಿಕ್ಷಕ ಆರ್.ಕೆ. ರಡ್ಡೇರ ಸಲಹೆ ನೀಡಿದರು.

ಸ್ಥಳೀಯ ಅನ್ನದಾನ ವಿಜಯ ಬಾಲಕರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ `ಸುಂದರಲಾಲ ಬಹುಗುಣ~ ಪರಿಸರ ವೇದಿಕೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆಯೊಂದಿಗೆ ಪ್ರಾಣಿ, ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ರಕ್ಷಣೆ ಮಾಡಬೇಕು. ಇದರಿಂದ ನಮಗೆ ಶುದ್ಧ ಗಾಳಿಯ ಜೊತೆಗೆ ಉತ್ತಮವಾದ ಪರಿಸರ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.