ಗಜೇಂದ್ರಗಡ: ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅವಶ್ಯ. ಈ ಹಿನ್ನೆಲೆಯಲ್ಲಿ ಪಾಲಕರು ತಮ್ಮ ಕಷ್ಟ–ಕಾರ್ಪಣ್ಯಗಳನ್ನು ಬದಿಗಿಟ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಶ್ರಮಿಸಬೇಕು ಎಂದು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶಿವಪ್ಪ ಚಲವಾದಿ ಅಭಿಪ್ರಾಯಪಟ್ಟರು.
ಮಂಗಳವಾರ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ನಂ–3 ರಲ್ಲಿ ಆಯೋಜಿಸಲಾಗಿದ್ದ 2013–14ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ ಹಾಗೂ ಇನ್ಸ್ಪೈರ್ ಅವಾರ್ಡ್ ಚೆಕ್ ವಿತರಿಸಿ ಮಾತನಾಡಿದ ಅವರು, ಸರ್ಕಾರಗಳು ಶಿಕ್ಷಣಕ್ಕೆ ಪ್ರಮುಖ ಪ್ರಾಶಸ್ತ್ಯ ನೀಡುತ್ತಿವೆ.
ಆದರೆ, ಪಾಲಕರ ಇಚ್ಛಾಶಕ್ತಿ ಕೊರತೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯಶ ಕಾಣುತ್ತಿದೆ. ಹೀಗಾಗಿ ಸದೃಢ ಸಮಾಜ ನಿರ್ಮಾಣದ ಸರ್ಕಾರಗಳ ಕನಸು ಸಾಕಾರಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿ ಮಹಬೂಬಿ ಕಳಕಾಪುರಗೆ ಇನ್ಸ್ಪೈರ್ ಅವಾರ್ಡ್ ಚೆಕ್ ವಿತರಿಸಲಾಯಿತು. ಮುಖ್ಯ ಶಿಕ್ಷಕ ಕೆ.ಐ.ಹಂಸನೂರ, ಎಸ್.ಸಿ.ಎಂ.ಸಿ ಸದಸ್ಯರಾದ ಎ.ಎಚ್್.ಕಟ್ಟಿಮನಿ, ಜಿ.ಬಿ.ಪತ್ತಾರ, ಐ.ಎಸ್.ಜಾಪಾಳ, ವೈ.ಎಚ್.ಪೂಜಾರ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.