ಗದಗ: `ಚದುರಂಗದ ಆಟ ಬಹು ಚಾಣಾಕ್ಷತೆಯ ಕ್ರೀಡೆಯಾಗಿದೆ. ಯುವ ಕರು ಆಟದಲ್ಲಿ ಆಸಕ್ತಿಯಿಂದ ಭಾಗವ ಹಿಸಬೇಕು~ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸ್ಥಳೀಯ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮಂಗಳವಾರ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಕವಿವಿ ಏಕವಲಯ ಪುರುಷರ ಹಾಗೂ ಮಹಿಳೆಯರ ಚದುರಂಗ ಸ್ಪರ್ಧೆ ಹಾಗೂ ಕವಿವಿ ತಂಡದ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚದುರಂಗ ಆಟದಿಂದ ಬುದ್ಧಿಶಕ್ತಿ ಚುರುಕುಗೊಳ್ಳುತ್ತದೆ. ಮಾನಸಿಕವಾಗಿ ಸದೃಢರಾಗುತ್ತಾರೆ. ಮನಸ್ಸು ಹೆಚ್ಚು ಕ್ರಿಯಾಶೀಲವಾಗುತ್ತದೆ. ಆಟದಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಮಹಾವಿದ್ಯಾಲಯದ ಸ್ಥಾನಿಕ ಸಮಿತಿ ಅಧ್ಯಕ್ಷ ಆರ್.ಕೆ. ಹಬೀಬ ಅಧ್ಯಕ್ಷತೆ ವಹಿಸಿದ್ದರು. ಬಿ.ಎನ್. ದಾಯಮ್ಮನವರ, ವಿ.ವೈ. ಮೊರಬರಡ್ಡಿ, ವಾಸಣ್ಣ ಕುರಡಗಿ, ಕೆ.ಬಿ. ತಳಗೇರಿ ಮತ್ತಿತರರು ಹಾಜರಿದ್ದರು.
ಕವಿವಿ ವ್ಯಾಪ್ತಿಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಉಮೇಶ ಬಾರಕೇರ ಸ್ವಾಗತಿಸಿದರು. ಶಶಿಕಾಂತ ಕೊರ್ಲಹಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.