ನರಗುಂದ: ‘ಮಹದಾಯಿ ಹೆಸರಲ್ಲಿ ರಾಜಕೀಯ ಕೆಸರೆರಚಾಟ ನಿಲ್ಲಿಸಬೇಕು. ಚುನಾವಣೆ ನೆಪ ಹೇಳದೇ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲು ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ಶ್ರೀಶೈಲ ಮೇಟಿ ಆಗ್ರಹಿಸಿದರು.
ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 982ನೇ ದಿನವಾದ ಶುಕ್ರವಾರ ಅವರು ಮಾತನಾಡಿ, ‘ಮಹದಾಯಿ ಯೋಜನೆ
ಯನ್ನು ಚುನಾವಣೆಯ ಅಸ್ತ್ರವಾಗಿ ಬಳಸಿಕೊಳ್ಳಬಾರದು. ಎಲ್ಲ ರಾಜಕೀಯ ಪಕ್ಷಗಳು ರೈತರ ಕನಸುಗಳನ್ನು ನನಸು ಮಾಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.
‘ನಮ್ಮ ಪಾಲಿನ ನೀರು ಪಡೆಯಲು ನಾವು ಹರಸಾಹಸ ಪಡುತ್ತಿದ್ದೇವೆ. ಈ ಭಾಗದ ಶಾಸಕ, ಸಂಸದರು ಗೋವಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ
ಗಳ ಮನವೊಲಿಸಿ ನಮ್ಮ ಪಾಲಿನನೀರನ್ನು ನಮಗೆ ನೀಡುವಂತೆ ಒತ್ತಾಯಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ ಸ್ಥಿತಿ ತಿಳಿಸಿ, ಪ್ರಧಾನಮಂತ್ರಿ
ಮೋದಿ ಮೇಲೆ ಒತ್ತಡ ಹೇರಬೇಕು’ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಹೇಳಿದರು.
ಎಸ್.ಬಿ.ಜೋಗಣ್ಣವರ, ಎಸ್.ಕೆ.ಗಿರಿಯಣ್ಣವರ, ಹನಮಂತ ಪಡೆಸೂರ, ಯಲ್ಲಪ್ಪ ಗುಡದರಿ, ಈರಣ್ಣ ಗಡಗಿ ಶೆಟ್ಟರ, ಚನ್ನಪ್ಪಗೌಡ ಪಾಟೀಲ ಧರಣಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.