ADVERTISEMENT

ಶುದ್ಧನೀರು ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2011, 19:30 IST
Last Updated 12 ಜೂನ್ 2011, 19:30 IST
ಶುದ್ಧನೀರು ಘಟಕ ಉದ್ಘಾಟನೆ
ಶುದ್ಧನೀರು ಘಟಕ ಉದ್ಘಾಟನೆ   

ಗದಗ: `ಶುದ್ಧನೀರು~ ಯೋಜನೆಯ 5ನೇ ಘಟಕ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಭಾನುವಾರ ಆರಂಭಗೊಂಡಿತು.ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಅವರು ಶುದ್ಧನೀರು ಘಟಕವನ್ನು ಸಾರ್ವಜನಿಕರ ಬಳಕೆಗಾಗಿ ಸಮರ್ಪಿಸಿದರು. ಕೆ.ಎಚ್. ಪಾಟೀಲ ಪ್ರತಿಷ್ಠಾನ ಹಾಗೂ ಗ್ರಾಮೀಣ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರು ಕುಡಿಯುವ ಶುದ್ಧ ನೀರಿನ ಮೊದಲ ಕ್ಯಾನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂದರವ್ವ ಬೇವಿನಕಟ್ಟಿ, ಉಪಾಧ್ಯಕ್ಷೆ ರೇಣುಕಾ ಬಸವರಾಜ ಖಾನಾಪುರ ಅವರಿಗೆ ನೀಡಿದರು.ಈ ಕುರಿತು ಮಾಜಿ ಸಚಿವ ಎಚ್.ಕೆ. ಪಾಟೀಲ ವಿವರ ನೀಡಿದರು.

ಮಾಜಿ ರಾಜ್ಯಸಭಾ ಸದಸ್ಯ ಸಚ್ಚಿದಾನಂದ ಸ್ವಾಮಿ, ಮಾಜಿ ಸಚಿವರಾದ ಕೆ.ಬಿ. ಕೋಳಿವಾಡ, ಎ.ಎಂ. ಹಿಂಡಸಗೇರಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಪಂಚಾಯಿತಿ ಸದಸ್ಯ ರೇವಣಪ್ಪ ಕೊಂಡಿಕೊಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಶಿವಗಂಗಾ ಶಿವರಡ್ಡಿ ಭೂಮಕ್ಕನವರ, ಡಿ.ಬಿ. ತಿರ್ಲಾಪುರ, ವಿ.ಡಿ. ರಂಗಪ್ಪನವರ, ಕೆ.ಎಚ್. ನಡುವಿನಮನಿ, ಆರ್.ಪಿ. ಹುಚ್ಚಣ್ಣವರ, ಗ್ರಾಮೀಣ ಆರೋಗ್ಯ ಸಂಸ್ಥೆಯ ಡಾ. ಎಸ್.ಆರ್. ನಾಗನೂರ ಹಾಗೂ ಇತರರು ಪಾಲ್ಗೊಂಡಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.