ADVERTISEMENT

ಸಂಭ್ರಮದ ವೀರಭದ್ರೇಶ್ವರ ಜಾತ್ರೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 5:35 IST
Last Updated 3 ಸೆಪ್ಟೆಂಬರ್ 2011, 5:35 IST

ನರೇಗಲ್: ಜಾತ್ರೆ, ಉತ್ಸವ, ಹಬ್ಬಗಳು ಜನರಲ್ಲಿ ಭಾವೈಕ್ಯತೆ ಮೂಡಿಸುವು ದರೂಂದಿಗೆ ಸಾಮಾಜಿಕ ಮೌಲ್ಯಗಳನ್ನು ಬಿಂಬಿಸುತ್ತವೆ ಎಂದು ನಿಡಗುಂದಿ ಕೊಪ್ಪದ ಶಿವಬಸವ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಶ್ರಾವಣಮಾಸದ ಶುಭ ದಿನಗಳಲ್ಲಿ ದಾಂಪತ್ಯಕ್ಕೆ ಕಾಲಿಡುತ್ತಿರುವ ದಂಪತಿಗಳು ಶುದ್ಧ ಜೀವನ ನಡೆಸಲು ಮುಂದಾಗಬೇಕು. ಶಿವಶರಣರು ಹಾಕಿಕೂಟ್ಟ ಸನ್ಮಾರ್ಗದಲ್ಲಿ ನಡೆದು ಜೀವನವನ್ನು ಸಾರ್ಥಕ ಪಡೆಸಿಕೂಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಿವಪ್ಪ ಕುಷ್ಟಗಿ ಮಾತನಾಡಿ, ಶರಣರ ಸಮ್ಮುಖದಲ್ಲಿ ನಡೆದಿರುವ ಸಾಮೂಹಿಕ ವಿವಾಹಗಳು ಸರಳ ಸುಂದರ ಜೀವನಕ್ಕೆ ನಾಂದಿಯಾಗಬೇಕು ಎಂದು ಹೇಳಿದರು.

ಎಪಿಎಂಸಿ ಸದಸ್ಯ ಬಾಳಪ್ಪ ಸೊಮಗೂಂಡ, ಬಸಪ್ಪ ಲಕ್ಕನಗೌಡರ, ಸುರೇಶ ಕಳಕೊಣ್ಣವರ, ಕಳಕಪ್ಪ ಹೂನವಾಡ ಮತ್ತು ವೀರಭದ್ರೇಶ್ವರ, ಗ್ರಾಮ ದೇವತೆ ಟ್ರಸ್ಟ್‌ನ ಸದಸ್ಯರು ಮತ್ತಿತರರು ಹಾಜರಿದ್ದರು. ಶರಣಪ್ಪ ಹಕ್ಕಿ ಸ್ವಾಗತಿಸಿದರು. ವಕೀಲ ಸೋಮು ಲಕ್ಕನಗೌಡ ವಂದಿಸಿದರು.

ರಥೋತ್ಸವ: ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ದೇವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜೆ ನಡೆಯಿತು. ನಂತರ ಕಳಸ ಹಾಗೂ ನಂದಿಕೋಲು ಮೆರವಣಿಗೆ, ಅಗ್ನಿಕುಂಡ ಹಾಯುವ ಕಾರ್ಯಕ್ರಮ ಜರುಗಿತು. ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.