ಗದಗ: ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನ , ಕೋಲ್ಕತ್ತಾ ಇವರಿಂದ 2013-–14 ನೇ ಸಾಲಿಗೆ ಸಾರ್ವಜನಿಕ ಗ್ರಂಥಾಲಯ ಸೇವೆ ಒದಗಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹೊಂದಾಣಿಕೇತರ ನೆರವು ಧನ ಸಹಾಯ ಯೋಜನೆ ಅಡಿಯಲ್ಲಿ ಧನ ಸಹಾಯ ಪಡೆಯಲು ಅರ್ಹ ಸ್ವಯಂ ಸೇವ ಸಂಸ್ಥೆಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಜ. 15- ರೊಳಗೆ ಸಂಬಂಧಿಸಿದ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗೆ ಜಿಲ್ಲಾ, ನಗರ ಕೆಂದ್ರ ಗ್ರಂಥಾಲಯ ಸಲ್ಲಿಸಲು ಕೋರಲಾಗಿದೆ.
ಸಾರ್ವಜನಿಕ ಗ್ರಂಥಾಲಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಘಟನೆಗಳಿಗೆ, ಸಂಸ್ಥೆಗಳಿಗೆ ಪುಸ್ತಕಗಳನ್ನು , ಪೀಠೋಪಕರಣಗಳನ್ನು ಹಾಗೂ ಸಲಕರಣೆಗಳನ್ನು ಖರೀದಿಸಲು ಹಾಗೂ ಸದರಿ ಸಂಘಟನೆಯ, ಸಂಸ್ಥೆಯ ಸಲುವಾಗಿ ಗ್ರಂಥಾಲಯ ಕಟ್ಟಡವನ್ನು ಅಭಿವೃದ್ಧಿ ಪಡಿಸಲು ಕೈಗೊಳ್ಳುವ ಹೆಚ್ಚುವರಿ ನಿರ್ಮಾಣ ಸೇರಿದಂತೆ ಕಟ್ಟಡ ಕಾಮಗಾರಿಗಳಿಗೆ ಹಣ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.
ಅರ್ಹ ಸ್ವಯಂ ಸೇವಾ ಸಂಸ್ಥೆಗಳವರು ಸಂಬಂಧಪಟ್ಟ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗಳು, ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯದಿಂದ ನಿಗದಿತ ಅರ್ಜಿ ಪಡೆದು, ಅರ್ಜಿಯಲ್ಲಿನ ಎಲ್ಲಾ ಅಂಶಗಳನ್ನು ಜ.15ರೊಳಗೆ ಭರ್ತಿ ಮಾಡಿ ಉಪನಿರ್ದೇಶಕರು, ಮುಖ್ಯ ನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗಳು, ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯ ಇವರಿಗೆ ಸಲ್ಲಿಸಬೇಕು.
ಯೋಜನೆಯು ಕೇಂದ್ರ ಸರ್ಕಾರದ ನಿಬಂಧನೆಗೆ ಒಳಪಟ್ಟು ನಿರ್ವಹಣೆ ಆಗುತ್ತಿರುವುದರಿಂದ ಅರ್ಜಿ ಮತ್ತು ಸೂಕ್ತ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ಒದಗಿಸುವುದು ಕಡ್ಡಾಯ. ಹೆಚ್ಚಿನ ವಿವರಗಳು ಬೇಕಾದಲ್ಲಿ ಆಯಾಯ ಜಿಲ್ಲೆಯ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗಳು, ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯ ಇಲಾಖೆ ಇವರಿಂದ ಪಡೆಯಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.