ADVERTISEMENT

ಹುಯಿಲಗೋಳದಲ್ಲಿ 3 ಬಣವೆಗಳಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 10:00 IST
Last Updated 2 ಏಪ್ರಿಲ್ 2018, 10:00 IST

ಗದಗ: ತಾಲ್ಲೂಕಿನ ಹುಯಿಲಗೋಳ ಗ್ರಾಮದಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮೂರು ಬಣವೆಗಳು ಸುಟ್ಟು ಹೋಗಿವೆ.ಗ್ರಾಮದ ಸಂತೋಷಕುಮಾರ ನವಲಗುಂದ ಹಾಗೂ ತಿಪ್ಪಣ್ಣ ಗಂಗಪ್ಪನವರ ಎಂಬುವವರಿಗೆ ಸೇರಿದ ಬಣವೆಗಳು ಭಸ್ಮವಾಗಿವೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.ಬೆಟಗೇರಿ ವೃತ್ತದ ಕಂದಾಯ ನಿರೀಕ್ಷಕ ಬಸವರಾಜ ಕಣ್ಣೂರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಗದಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.