ADVERTISEMENT

ಹುಲ್ಲು ಬೆಳೆಯಲು ಆಧುನಿಕ ತಂತ್ರಜ್ಞಾನ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2012, 6:05 IST
Last Updated 14 ನವೆಂಬರ್ 2012, 6:05 IST

ಗದಗ: ಬರಗಾಲ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವು ಪೂರೈಕೆಗೆ  ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರವು ಆಧುನಿಕ ತಂತ್ರಜ್ಞಾನದಿಂದ ಹುಲ್ಲು ಬೆಳೆಯುವ ವಿಧಾನವನ್ನು ಪರಿಚಯಿಸಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಮಂಗಳವಾರ ಹೇಳಿದರು.

ಈ ವಿಧಾನದಲ್ಲಿ ಏಳು ದಿನಗಳ ಅವಧಿಯಲ್ಲಿ ಹುಲ್ಲು ಬೆಳೆಸಿ, ಜಾನು ವಾರುಗಳಿಗೆ ಒದಗಿಸಲು ಸಾಧ್ಯ ಎಂದು ಅವರು ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ಬರದಿಂದಾಗಿ ಶೇ 40ರಷ್ಟು ಜಾನುವಾರು  ಸಾವನ ್ನಪ್ಪುತ್ತಿವೆ. ಇದನ್ನು ತಡೆಗಟ್ಟಲು ಹಾಗೂ ಹೈನುಗಾರಿಕೆಯನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ ಎಂದರು.

ತಗಡಿನ ತಟ್ಟೆಗಳಲ್ಲಿ ಮೇವು ಬೆಳೆಯುವ ಈ ಹೊಸ ತಂತ್ರಜ್ಞಾನ ವಿಧಾನ  ಇದೇ 15 ರಂದು ಸಾರ್ವ ಜನಿಕರಿಗೆ ಪ್ರದರ್ಶಿ ಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.