ADVERTISEMENT

ಕಡಲೆ ಖರೀದಿ ಕೇಂದ್ರಕ್ಕಾಗಿ ರಸ್ತೆ ತಡೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 9:04 IST
Last Updated 3 ಫೆಬ್ರುವರಿ 2018, 9:04 IST
ಕಡಲೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಶೀಘ್ರವೇ ಖರೀದಿ ಕೇಂದ್ರವನ್ನು ಸ್ಥಾಪಿಸಿಬೇಕು ಎಂದು ಆಗ್ರಹಿಸಿ ರೋಣ ತಾಲ್ಲೂಕಿನ ಬೆಳವಣಕಿ ಗ್ರಾಮದಲ್ಲಿ ಉತ್ತರ ಕರ್ನಾಟಕ ರೈತ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು
ಕಡಲೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಶೀಘ್ರವೇ ಖರೀದಿ ಕೇಂದ್ರವನ್ನು ಸ್ಥಾಪಿಸಿಬೇಕು ಎಂದು ಆಗ್ರಹಿಸಿ ರೋಣ ತಾಲ್ಲೂಕಿನ ಬೆಳವಣಕಿ ಗ್ರಾಮದಲ್ಲಿ ಉತ್ತರ ಕರ್ನಾಟಕ ರೈತ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು   

ರೋಣ: ಕಡಲೆ ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಬೇಕು ಮತ್ತು ಶೀಘ್ರದಲ್ಲಿಯೇ ಕಡಲೆ ಖರೀದಿ ಕೇಂದ್ರವನ್ನು ಸ್ಥಾಪಿಸಿಬೇಕು, ಪಿಡಿಒ ನೇಮಿಸಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ರೈತ ಸಂಘ ಹಾಗೂ ಬೆಳವಣಕಿ ರೈತರು ನಾಲ್ಕೈದು ಗಂಟೆ ರಸ್ತೆ ತಡೆ ನಡೆಸಿದರು.

ಉತ್ತರ ಕರ್ನಾಟಕ ರೈತ ಸಂಘದ ಮುಖಂಡ ಲೋಕನಗೌಡ ಗೌಡರ ಮಾತನಾಡಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಕಡಲೆ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಮಾಡಿದ್ದಾರೆ. ಹೀಗಾಗಿ ಕಡಲೆ ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಬೇಕು ಎಂದರು.

ಕಡಲೆ ಬೆಳೆಗೆ ಪ್ರತಿ ಕ್ವಿಂಟಲ್‌ಗೆ ₹5400 ನಿಗದಿಪಡಿಸಿ ಶೀಘ್ರವೇ ಜಿಲ್ಲೆಯ್ಯಾದ್ಯಂತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದರು. ಬೆಳವಣಕಿ ಗ್ರಾಮಸ್ಥರು ಮಾತನಾಡಿ ಗ್ರಾಮಕ್ಕೆ ಹಲವು ತಿಂಗಳುಗಳಿಂದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಇಲ್ಲ. ಹೀಗಾಗಿ ಕೂಡಲೇ ಪಿಡಿಒ ನೇಮಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮೂರು ತಿಂಗಳ ಹಿಂದೆ ಎಸ್.ಸಿ ಕಾಲೊನಿಯಲ್ಲಿ ಮಳೆಯಾಗಿ ಹಲವು ಮನೆಗಳು ಬಿದ್ದು ಹೋಗಿವೆ. ಈ ಕುರಿತು ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲಿಸಿ ಮನೆಯ ಉತಾರಗಳನ್ನು ಒದಗಿಸಿ ಎಂದು ಹೇಳಿದ್ದರು.

ಆದರೆ ಉತಾರ ನೀಡಲು ಪಿಡಿಒ ಇಲ್ಲ. ಆದ್ದರಿಂದ ತಕ್ಷಣವೇ ಕಾಯಂ ಪಿಡಿಒ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಸುಭಾಸ ಮುದಿಗೌಡ್ರ, ವೀರಪ್ಪ ಕುಸುಗಲ್ಲ, ಎಂ.ವಿ.ದೇಸಾಯಿಗೌಡ್ರ, ಹನುಮಂತಪ್ಪ ಸೈದಾಪೂರ, ಪ್ರಭು ಪಾಟೀಲ, ಭೀಮರಡ್ಡಿ ಹಾಳಕೇರಿ, ಮುತ್ತು ನಂದಿ ಮತ್ತು ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.