ADVERTISEMENT

ಅಬ್ಬಿಕೆರೆ ಕೋಡಿ ಹರಿದು, ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 4:53 IST
Last Updated 6 ಸೆಪ್ಟೆಂಬರ್ 2022, 4:53 IST
   

ಮುಳಗುಂದ (ಗದಗ ಜಿಲ್ಲೆ): ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸೋಮವಾರ ರಾತ್ರಿ ಮೂರು ತಾಸಿಗೂ ಹೆಚ್ಚು ಕಾಲ ರಭಸದ ಮಳೆ ಸುರಿತು.
ಮಳೆ ಪರಿಣಾಮ ಅಬ್ಬಿ ಕೆರೆ ತುಂಬಿ ಕೋಡಿ ಹರಿದಿದ್ದು, ಸಂಗನಪೇಟೆ ಓಣಿಯ ಇಪ್ಪತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಹುಸೇನಸಾಬ ದೊಡ್ಡಮನಿ ಅವರ ಮನೆ ಗೋಡೆ ಕುಸಿದು ಬಿದ್ದಿದೆ. ರಾತ್ರಿ ಸುರಿದ ಮಳೆಯಿಂದ ಕೆರೆ ನೀರು ಹರಿಯುವ ಪ್ರಮಾಣ ಹೆಚ್ಚಾಗಿ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ದವಸ ಧಾನ್ಯ, ನೀರು ಪಾಲಾಗಿದೆ. ಸಾಮಾನು ಸರಂಜಾಮು, ಶಾಲೆ ಮಕ್ಕಳ ಪುಸ್ತಕ ನೀರಲ್ಲಿ ತೇಲಿವೆ. ಮನೆಯಲ್ಲಿ ಶೇಕರಿಸಿಟ್ಟಿದ್ದ ರಾಸಾಯನಿಕ ಗೊಬ್ಬರ ಕರಗಿದೆ, ರಾತ್ರಿಯಿಡಿ ನೀರು ಹೊರ ಹಾಕಲು ಜನ ಪರದಾಡಿದರು.
ರಾತ್ರಿ ಸ್ಥಳಿರು ಜೆಸಿಬಿ ಬಳಸಿ ರಸ್ತೆ ಅಗೆದು ಕೆರೆ ಕೋಡಿ ನೀರು ಹರಿಯಲು ದಾರಿ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುನಾಥ ಗುಳೇದ, ಗ್ರಾಮಲೆಕ್ಕಾಧಿಕಾರಿ ಶ್ರೀಧರ ಪಟ್ಟೇದ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.