ADVERTISEMENT

ಮೂಲ ಸೌಲಭ್ಯ ಕಲ್ಪಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:06 IST
Last Updated 16 ಸೆಪ್ಟೆಂಬರ್ 2020, 5:06 IST
ಕರೇಗೋರಿ ಆಶ್ರಯ ಕಾಲೊನಿ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು
ಕರೇಗೋರಿ ಆಶ್ರಯ ಕಾಲೊನಿ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು   

ಲಕ್ಷ್ಮೇಶ್ವರ: ಸ್ಥಳೀಯ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಅಲ್ಲಿನ ನಿವಾಸಿಗಳು ಸೋಮವಾರ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು.

ಕಾಲೊನಿಯಲ್ಲಿ ಸುಸಜ್ಜಿತ ರಸ್ತೆ, ಚರಂಡಿ ಇಲ್ಲ. ಸಮಪರ್ಕ ಬೀದಿ ದೀಪಗಳ ವ್ಯವಸ್ಥೆ ಇಲ್ಲ. ಅಂಗನವಾಡಿ ಇಲ್ಲದೆ ನಾವು ಪರದಾಡುತ್ತಿದ್ದೇವೆ. ಅಲ್ಲದೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಕಟ್ಟಿಲ್ಲ ಎಂದು ನಾಗಪ್ಪ ಮುಳಗುಂದ, ಬಿ.ಬಿ. ರಾಜು, ಐ.ಎಫ್. ಕೋವಣ್ಣವರ, ಈಶ್ವರಪ್ಪ ನುಚ್ಚಂಬಲಿ, ಎಂ.ಎನ್. ಸಂಶಿ, ಸೋಮಣ್ಣ ಅಳ್ಳಳ್ಳಿ, ಮಂಜು ಶಿರಬಡಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT