ಗದಗ: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಮುಂಡರಗಿ ತಾಲ್ಲೂಕಿನ ಬೆಣ್ಣೆಹಳ್ಳದಲ್ಲಿ ಟ್ರಾಕ್ಟರ್ ಸಮೇತ ಕೊಚ್ಚಿಕೊಂಡು ಹೋಗಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಕೊಪ್ಪಳ ಜಿಲ್ಲೆ ಹೈದರ್ ನಗರ ತಾಂಡಾದ ಶಿವು ಬಡಿಗೇರ ಅಪಾಯದಿಂದ ಪಾರಾಗಿದ್ದಾರೆ. ಆದರೆ ಶಿವು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಟಿವಿ ಮಾಧ್ಯಮಗಳು ಮೃತಪಟ್ಟಿರುವ ಸುದ್ದಿ ಪ್ರಕಟಿಸಿದ್ದವು.
ಮುಂಡರಗಿ ತಾಲ್ಲೂಕಿನ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ಲೋಡ್ ಇಳಿಸಿ ಬುಧವಾರ ರಾತ್ರಿ ಊರಿಗೆ ಮರಳುವಾಗ ಟ್ರ್ಯಾಕ್ಟರ್ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಟ್ರ್ಯಾಕ್ಟರ್ನಲ್ಲಿ ಶಿವು ಜತೆಗೆ ಸಹೋದರವಿಜಯ್ ಕುಮಾರ್ ಇದ್ದರು. ಟ್ರ್ಯಾಕ್ಟರ್ ನೀರಿನಲ್ಲಿ ಮುಳುಗುತ್ತಿದ್ದಂತೆ ವಿಜಯ್ ಕುಮಾರ್ ಈಜಿ ಪಾರಾಗಿ ಬಂದಿದ್ದರು. ಆದರೆಶಿವು ಟ್ರ್ಯಾಕ್ಟರ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ಘಟನೆ ನಡೆದ ಕೂಡಲೇಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳಿಯರುಶೋಧ ಕಾರ್ಯಾಚರಣೆ ನಡೆಸಿದರುಶಿವು ಪತ್ತೆಯಾಗಿರಲಿಲ್ಲ. ಗುರುವಾರ ಬೆಳಗ್ಗೆ ಶಿವು ಸಂಬಂಧಿಕರಿಗೆ ಕರೆ ಮಾಡಿ ಅಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.