ADVERTISEMENT

ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್‌ಗೆ ಒಳಪಡುವ ಆತಂಕ; ತರಕಾರಿ ವ್ಯಾಪಾರ ಬಂದ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 13:13 IST
Last Updated 6 ಆಗಸ್ಟ್ 2020, 13:13 IST

ಲಕ್ಷ್ಮೇಶ್ವರ: ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುವವರೆಲ್ಲರೂ ಕಡ್ಡಾಯವಾಗಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂಬ ವದಂತಿ ಹಬ್ಬಿದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಲು ಬೆದರಿದ ಇಲ್ಲಿನ ಭಾನು ಮಾರ್ಕೆಟ್‍ನ ತರಕಾರಿ ವ್ಯಾಪಾರಸ್ಥರು ಗುರುವಾರ ಇಡೀ ದಿನ ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದರು. ಇದರಿಂದಾಗಿ ತರಕಾರಿ ಖರೀದಿಗೆ ಬಂದಿದ್ದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಯಿತು.

ಈ ಕುರಿತು ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟರ ಅವರನ್ನು ಸಂಪರ್ಕಿಸಿದಾಗ ‘ಸಾರ್ವತ್ರಿಕವಾಗಿ ಟೆಸ್ಟ್ ಮಾಡಿಸಿಕೊಳ್ಳಲು ವ್ಯಾಪಾರಸ್ಥರಿಗೆ ಸೂಚನೆ ನೀಡಿಲ್ಲ. ವದಂತಿ ಹಬ್ಬಿದ್ದರಿಂದ ವ್ಯಾಪಾರಸ್ಥರು ತಮ್ಮಷ್ಟಕ್ಕೆ ತಾವೇ ವ್ಯಾಪಾರ ಬಂದ್ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT