ಗದಗ: 2014ರ ಐಎಎಸ್ ಕರ್ನಾಟಕ ಕೇಡರ್ನ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಗದಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಈ ಹಿಂದೆ ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶ್ಬಾಬು ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿತ್ತು. ಅವರ ವರ್ಗಾವಣೆ ನಂತರ ಗದಗ ಜಿಲ್ಲಾಧಿಕಾರಿಯಾಗಿ ಹೊನ್ನಾಂಬ ನೇಮಕಗೊಂಡಿದ್ದರು. ಆದರೆ, ಅವರು ಈವರೆಗೆ ಅಧಿಕಾರ ಸ್ವೀಕರಿಸಿರಲಿಲ್ಲ.
ಸ್ಥಾನದ ನಿರೀಕ್ಷೆಯಲ್ಲಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಈಗ ಗದಗ ಡಿಸಿಯನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.