ನರಗುಂದ: ವರದಕ್ಷಿಣೆ ಕಿರುಕುಳದಿಂದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಭಾನುವಾರ ಪಟ್ಟಣದಲ್ಲಿ ನಡೆದಿದೆ.
ಮೃತ ಯುವತಿ ಪಟ್ಟಣದ ಸಿದ್ಧರಾಮೇಶ್ವರ ನಗರದ ದೀಪಾ ವಿನೋದ ಒಡ್ಡರ (22) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ತಾಯಿ ಮುಂಡರಗಿ ತಾಲ್ಲೂಕಿನ ಅತ್ತಿಕಟ್ಟಿಯ ಸುಸವ್ವ ಹಾಲಿನ ನರಗುಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಮೃತಳ ಪತಿ, ಅತ್ತೆ, ಮಾವ, ನಾದಿನಿ ಸೇರಿ ಹಲ್ಲೆ ಮಾಡಿ ಸಾಯಿಸಿದ್ದಾರೆ. ಜತೆಗೆ ಸಾಕ್ಷಗಳನ್ನು ನಾಶಪಡಿಸಿದ್ದಾರೆ. ಈಗ ಅವರು ನೇಣು ಹಾಕಿಕೊಂಡಿದ್ದಾಳೆ ಎಂದು ಹೇಳಿದ್ದಾರೆ ಎಂದು ತಾಯಿ ಸುಸವ್ವ ಹಾಲಿನ ಪೊಲೀಸ್ರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.