ನರಗುಂದ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ಸಂಜೆ ಒಂದು ತಾಸು ಭಾರಿ ಮಳೆಯಾಗಿದ್ದು ಕೊಣ್ಣೂರ ಬಳಿ ಮಲಪ್ರಭಾ ಹೊಳೆಯ ಹಳೆ ಸೇತುವೆ ಸಂಪೂರ್ಣ ಮುಳುಗಿದೆ. ಸುತ್ತಮುತ್ತಲಿನ ಜಮೀನುಗಳಲ್ಲಿನ ಬೆಳೆಗಳು ಜಲಾವೃತವಾಗಿವೆ.
ಅಲ್ಲಲ್ಲಿ ಮನೆಗಳು ಕುಸಿದಿವೆ. ಹಲವೆಡೆ ರಸ್ತೆಗಳು ಕಿತ್ತು ಹೋಗಿವೆ.
ಬೆಣ್ಣೆ ಹಳ್ಳದ ಆತಂಕ: ತಾಲ್ಲೂಕಿನ ಕುರ್ಲಗೇರಿ, ಸುರಕೋಡ, ಯಾವಗಲ್ ಬಳಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಯಾವಗಲ್ ಬಳಿ ಬೆಣ್ಣೆ ಹಳ್ಳ ಸೇತುವೆ ಮೇಲೆ ಹರಿದು ಎರಡು ಗಂಟೆ ಸಂಚಾರ ಬಂದ್ ಆಗಿತ್ತು. ಸಂಜೆ ಪ್ರವಾಹ ಕಡಿಮೆಯಾಗಿದ್ದರಿಂದ ಮತ್ತೆ ಸಂಚಾರ ಆರಂಭವಾಯಿತು.
ಅಕ್ಕಿ ಹಾನಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಾಯಿ ದಾಸೋಹ ಕೇಂದ್ರಕ್ಕೆ ಶನಿವಾರ ಮಳೆ ನೀರು ನುಗ್ಗಿದ ಪರಿಣಾಮ ಅಲ್ಲಿದ್ದ ಅಕ್ಕಿ ಚೀಲಗಳು ಹಾನಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.